ಕಾಲುವೆಗೆ ಜಾರಿದ ಕಾರು : ಒಂದೆ ಕುಟುಂಬದ ಐವರು ಜಲಸಮಾಧಿ
ಕನ್ನಡಮ್ಮ ಸುದ್ದಿ-ಬೆಳಗಾವಿ: ರಸ್ತೆ ಮೇಲೆ ಹೋಗುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಉರುಳಿದ್ದು, ಕಾರಿನಲ್ಲಿದ್ದ ಒಂದೇ ಕುಟುಂಬದ ಐವರು ಜಲಸಮಾಧಿಯಾಗಿದ್ದಾರೆ.
ಸೋಮವಾರ ತಡರಾತ್ರಿ ಬೆಳಗಾವಿ ಜಿಲ್ಲೆಯ ಸವದತ್ತಿಯ ಕಡಬಿ ಗ್ರಾಮದ ಬಳಿ ಘಟಪ್ರಭಾ ಎಡದಂಡೆ ನಾಲೆಗೆ ಕಾರು ಬಿದ್ದು ಈ ದುರ್ಘಟನೆ ನಡೆದಿದೆ.
ಮೃತರನ್ನು ಕಡಬಿ ಗ್ರಾಮದ ಪಕ್ಕೀರವ್ವ ಪೂಜೇರಿ(29), ಹನುಮಂತ ಪೂಜೇರಿ(60), ಲಗಮಣ್ಣ ಪೂಜೇರಿ(38), ಪಾರವ್ವ ಪೂಜೇರಿ(50), ಲಕ್ಷ್ಮೀ ಪೂಜೇರಿ(40) ಎಂದು ಗುರುತಿಸಲಾಗಿದೆ. ಕಾರು ಚಾಲಕ ಅಡಿವೇಪ್ಪ ಮಾಳಗಿ ಈಜಿ ದಡ ಸೇರಿ ಪ್ರಾಣ ಉಳಿಸಿಕೊಂಡಿದ್ದಾನೆ.
ಮುರುಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
loading...