ಬೆಳಗಾವಿ
ಗೋಹತ್ಯೆ ನಿಷೇಧ ಮತ್ತು ಲವ್ ಜಿಹಾದ್ ಬಗ್ಗೆ ತರ್ಮಾನ ಮಾಡಿದ್ದೇವೆ. ಈ ಅಧಿವೇಶನದಲ್ಲಿ ಸಾಧ್ಯವಾದ್ರೆ ಗೋಹತ್ಯೆ ಮಸೂದೆ ಜಾರಿಗೆ ತರಬೇಕು ಅಂತ ರ್ಚೆಯಾಗಿದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ಶನಿವಾರ ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಕಾಂಗ್ರೆಸ್ನಷ್ಟು ಬಿಜೆಪಿಯವರು ದ್ರೋಹ ಮಾಡಿರಲಿಲ್ಲ ಎಂಬ ಕುಮಾರಸ್ವಾಮಿ ಹೇಳಿಕೆ ಕುರಿತಾಗಿ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಕುಮಾರಸ್ವಾಮಿಯವರು ಸತ್ಯ ಸಂಗತಿಗಳನ್ನು ಹೇಳುತ್ತಿದ್ದಾರೆ ಎಂದರು.ಬೆಳಗಾವಿಯಲ್ಲಿ ಬಿಜೆಪಿ ಕರ್ಯಕಾರಣಿ ಅತ್ಯಂತ ಯಶಸ್ವಿಯಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಶಾಸಕರು ಮತ್ತು ಕರ್ಯರ್ತರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಸಿಎಂ ತಿಳಿಸಿದರು.
ಕರ್ಯಕಾರಿಣಿ ಸಭೆಯಲ್ಲಿ ಗೋಹತ್ಯೆ ನಿಷೇಧದ ಬಗ್ಗೆ ಮತ್ತು ಲವ್ ಜಿಹಾದ್ ಬಗ್ಗೆ ತರ್ಮಾನ ಮಾಡಿದ್ದೇವೆ. ಈ ಅಧಿವೇಶನದಲ್ಲಿ ಸಾಧ್ಯವಾದರೆ ಗೋಹತ್ಯೆ ಮಸೂದೆ ಜಾರಿಗೆ ತರಬೇಕು ಅಂತಾ ರ್ಚೆಯಾಗಿದೆ. ಮಸ್ಕಿ, ಬಸವಕಲ್ಯಾಣ ಮತ್ತು ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ದೊಡ್ಡ ಅಂತರದಲ್ಲಿ ಗೆಲ್ಲುವ ವಿಶ್ವಾಸವಿದೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.